ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm