ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm