ಬ್ರೇಕಿಂಗ್ ನ್ಯೂಸ್
26-01-21 10:45 am Headline Karnataka News Network ಕರ್ನಾಟಕ
ಬಳ್ಳಾರಿ, ಜ.26: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ , ಮೂಲತಃ ಮಂಗಳಮುಖಿಯಾಗಿರುವ ಜೋಗತಿ ಮಂಜಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಹುಟ್ಟಿದ ಜೋಗತಿ ಮಂಜಮ್ಮ ಪ್ರಸ್ತುತ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ವಾಸವಿದ್ದಾರೆ. ತಮ್ಮ 18ನೇ ವಯಸ್ಸಿನಿಂದ ಕಲಾಸೇವೆ ಆರಂಭಿಸಿ, ಜೋಗತಿ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಈವರೆಗೂ ಸಾವಿರಾರು ಪ್ರದರ್ಶನಗಳನ್ನು ರಾಜ್ಯಾದ್ಯಂತ ನೀಡಿದ್ದಾರೆ. ಅವರು ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗುವ ವೇಳೆಗಾಗಲೇ ಸ್ವೀಕರಿಸಿದ್ದ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡವರು.

ಸಂಕಷ್ಟಗಳ ನಡುವೆ ಬದುಕು ಕಟ್ಟಿಕೊಂಡ ಮಂಗಳಮುಖಿ ಜೋಗತಿ ಮಂಜಮ್ಮ ಅವರು ಕಲಾ ಕ್ಷೇತ್ರದಲ್ಲಿ ಮಾಡಿದ ಅಪಾರ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ತೃತೀಯ ಲಿಂಗಿ ಸಮುದಾಯದಲ್ಲಿ ಮಂಜಮ್ಮ ಜೋಗತಿ ಅವರು ಮೊದಲ ಬಾರಿಗೆ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಜಮ್ಮ ಅವರ ಸಾಧನೆಗೆ ಹಲವಾರು ಪ್ರಶಸ್ತಿ , ಗೌರವಗಳು ಅರಸಿ ಬಂದಿವೆ. 2006ರಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ , 2007ರಲ್ಲಿ ಜಾನಪದ ಶ್ರೀ ಪ್ರಶಸ್ತಿ , 2008ರಲ್ಲಿ ಜಾನಪದ ಲೋಕ ಪ್ರಶಸ್ತಿ , 2010 ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ,2012 ರಲ್ಲಿ ಶ್ರೀ ತಾಯಮ್ಮ ಮಲ್ಲಯ್ಯ ದತ್ತಿನಿಧಿ ಪ್ರಶಸ್ತಿ ,2014 ರಲ್ಲಿ ಸಮಾಜ ಸಖಿ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ದೇಶದ ಪ್ರತಿಷ್ಠಿತ ಮತ್ತು ಜೀವಮಾನದಲ್ಲಿ ಅತ್ಯುನ್ನತ ಸಾಧನೆಗಾಗಿ ನೀಡಲಾಗುವ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
FIve distinguished personalities from Karnataka have been conferred with the Padma awards in 2021 among which Transgender Matha B Manjamma Jogati from Bellary is also one among them.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm