ಬ್ರೇಕಿಂಗ್ ನ್ಯೂಸ್
26-01-21 10:45 am Headline Karnataka News Network ಕರ್ನಾಟಕ
ಬಳ್ಳಾರಿ, ಜ.26: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ , ಮೂಲತಃ ಮಂಗಳಮುಖಿಯಾಗಿರುವ ಜೋಗತಿ ಮಂಜಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಹುಟ್ಟಿದ ಜೋಗತಿ ಮಂಜಮ್ಮ ಪ್ರಸ್ತುತ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ವಾಸವಿದ್ದಾರೆ. ತಮ್ಮ 18ನೇ ವಯಸ್ಸಿನಿಂದ ಕಲಾಸೇವೆ ಆರಂಭಿಸಿ, ಜೋಗತಿ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಈವರೆಗೂ ಸಾವಿರಾರು ಪ್ರದರ್ಶನಗಳನ್ನು ರಾಜ್ಯಾದ್ಯಂತ ನೀಡಿದ್ದಾರೆ. ಅವರು ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗುವ ವೇಳೆಗಾಗಲೇ ಸ್ವೀಕರಿಸಿದ್ದ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡವರು.

ಸಂಕಷ್ಟಗಳ ನಡುವೆ ಬದುಕು ಕಟ್ಟಿಕೊಂಡ ಮಂಗಳಮುಖಿ ಜೋಗತಿ ಮಂಜಮ್ಮ ಅವರು ಕಲಾ ಕ್ಷೇತ್ರದಲ್ಲಿ ಮಾಡಿದ ಅಪಾರ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ತೃತೀಯ ಲಿಂಗಿ ಸಮುದಾಯದಲ್ಲಿ ಮಂಜಮ್ಮ ಜೋಗತಿ ಅವರು ಮೊದಲ ಬಾರಿಗೆ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಜಮ್ಮ ಅವರ ಸಾಧನೆಗೆ ಹಲವಾರು ಪ್ರಶಸ್ತಿ , ಗೌರವಗಳು ಅರಸಿ ಬಂದಿವೆ. 2006ರಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ , 2007ರಲ್ಲಿ ಜಾನಪದ ಶ್ರೀ ಪ್ರಶಸ್ತಿ , 2008ರಲ್ಲಿ ಜಾನಪದ ಲೋಕ ಪ್ರಶಸ್ತಿ , 2010 ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ,2012 ರಲ್ಲಿ ಶ್ರೀ ತಾಯಮ್ಮ ಮಲ್ಲಯ್ಯ ದತ್ತಿನಿಧಿ ಪ್ರಶಸ್ತಿ ,2014 ರಲ್ಲಿ ಸಮಾಜ ಸಖಿ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ದೇಶದ ಪ್ರತಿಷ್ಠಿತ ಮತ್ತು ಜೀವಮಾನದಲ್ಲಿ ಅತ್ಯುನ್ನತ ಸಾಧನೆಗಾಗಿ ನೀಡಲಾಗುವ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
FIve distinguished personalities from Karnataka have been conferred with the Padma awards in 2021 among which Transgender Matha B Manjamma Jogati from Bellary is also one among them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm