ಬ್ರೇಕಿಂಗ್ ನ್ಯೂಸ್
27-01-21 10:47 am Bangalore Correspondent ಕರ್ನಾಟಕ
ಬೆಂಗಳೂರು, ಜ. 27: ಅಕ್ರಮ ಆಸ್ತಿ ಪ್ರಕರಣದಲ್ಲಿ ಐದು ವರ್ಷಗಳ ಶಿಕ್ಷೆ ಪೂರೈಸಿದ ತಮಿಳುನಾಡಿನ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ, ಅವರ ಸಂಬಂಧಿ ಇಳವರಸಿ ಮತ್ತು ಸಹೋದರ ಸುಧಾಕರ್ ಅವರ ಜೈಲುವಾಸ ಇಂದಿಗೆ ಕೊನೆಗೊಳ್ಳಲಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದ ಮೂವರೂ ಬುಧವಾರ ಬಿಡುಗಡೆಯಾಗಲಿದ್ದಾರೆ.
ಆದರೆ ಕೋವಿಡ್ ಪಾಸಿಟಿವ್ಗೆ ಒಳಗಾಗಿರುವ ಶಶಿಕಲಾ ಮತ್ತು ಇಳವರಸಿ ಇಬ್ಬರೂ ಪ್ರಸ್ತುತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಆಸ್ಪತ್ರೆಯಿಂದಲೇ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ಕೈದಿಗಳಿಂದ ವಿವಿಧ ದಾಖಲೆಗಳಿಗೆ ಸಹಿ ಹಾಕಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆದರೆ ಶಶಿಕಲಾ ಮತ್ತು ಇಳವರಸಿ ಅವರು ಆಸ್ಪತ್ರೆಯಲ್ಲಿರುವ ಕಾರಣ ಕಾರಾಗೃಹ ಅಧಿಕಾರಿಗಳು ಮಂಗಳವಾರ ಸ್ವತಃ ಆಸ್ಪತ್ರೆಗೆ ತೆರಳಿ, ಪಿಪಿಇ ಕಿಟ್ ಧರಿಸಿ ಅವರ ಸಹಿ ಸಂಗ್ರಹಿಸಿದ್ದಾರೆ. ಈ ಮೂಲಕ ಬುಧವಾರ ಅವರ ಬಿಡುಗಡೆಗೆ ಬೇಕಾದ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ.

ಮಾಜಿ ಸಿಎಂ ಜಯಲಲಿತಾ ಆಪ್ತೆಯಾಗಿದ್ದ ಶಶಿಕಲಾ, ಜಯಾ ಜೊತೆಗಿದ್ದುಕೊಂಡೇ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದರು. ಜಯಲಲಿತಾ ಅದೇ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಈಗ ಚುನಾವಣೆ ಸಂದರ್ಭದಲ್ಲೇ ಶಶಿಕಲಾ ತಮಿಳುನಾಡಿಗೆ ಮರಳುತ್ತಿದ್ದು ಚುನಾವಣೆ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರೆಯೇ ಎನ್ನುವ ಕುತೂಹಲ ಎದ್ದಿದೆ.
Four years after she was convicted in a disproportionate assets case, V K Sasikala will Wednesday be freed from the Parappana Agrahara prison in Bengaluru. Sasikala, former AIADMK leader and a close aide of ex-Tamil Nadu chief minister late J Jayalalithaa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm