ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.

ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.

ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm