ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.

ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.

ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm