ಬ್ರೇಕಿಂಗ್ ನ್ಯೂಸ್
28-01-21 03:08 pm Bangalore Correspondent ಕರ್ನಾಟಕ
ಬೆಂಗಳೂರು, ಜ.28: ವಿಧಾನ ಪರಿಷತ್ತಿನಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಖಾತ್ರಿಯಾಗಿದೆ. ಪರಿಷತ್ ಸಭಾಪತಿ ಸ್ಥಾನಕ್ಕೆ ಈಗಾಗ್ಲೇ ಜೆಡಿಎಸ್ ಹಿರಿಯ ಶಾಸಕ, ಮಾಜಿ ಸಚಿವ ಬಸವರಾಜ್ ಹೊರಟ್ಟಿ ಹೆಸರನ್ನು ಫೈನಲ್ ಮಾಡಿರುವಾಗಲೇ ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಸದಸ್ಯರ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ಸಿನ ಹೊರಟ್ಟಿ ಮತ್ತು ಕೋನ ರೆಡ್ಡಿ ಉಪಸ್ಥಿತರಿದ್ದುದು ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿಗೆ ಬಲ ಬಂದಂತಾಗಿದೆ.

ಇದೇ ವೇಳೆ, ಕಾಂಗ್ರೆಸ್ ನಿಂದ ಉಪ ಸಭಾಪತಿ ಸ್ಥಾನಕ್ಕೆ ಕೆ.ಸಿ. ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಬಿ.ಕೆ. ಹರಿಪ್ರಸಾದ್, ಪರಿಷತ್ತಿನ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಎಸ್.ಆರ್ ಪಾಟೀಲ್ ಉಪಸ್ಥಿತರಿದ್ದರು.

ಜೆಡಿಎಸ್ ಮುಖಂಡ, ಉಪ ಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಆ ಸ್ಥಾನ ತೆರವಾಗಿತ್ತು. ಸಭಾಪತಿ ಜಾಗದಲ್ಲಿ ಕಾಂಗ್ರೆಸಿನ ಪ್ರತಾಪಚಂದ್ರ ಶೆಟ್ಟಿ ಇದ್ದು, ಅವರನ್ನು ಕೆಳಗಿಳಿಸಲು ಬಿಜೆಪಿ ಮತ್ತು ಜೆಡಿಎಸ್ ಮುಂದಾಗಿದೆ. ಬಿಜೆಪಿ ಸದಸ್ಯರು ಈಗಾಗ್ಲೇ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ಮಂಡಿಸಿದ್ದಾರೆ. ಅದಕ್ಕೂ ಮುನ್ನ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದ್ದು, ಮೊದಲು ಅದನ್ನು ತುಂಬಲು ಕಸರತ್ತು ನಡೆದಿದೆ.
ಪರಿಷತ್ತಿನಲ್ಲಿ ಬಿಜೆಪಿ 31 ಸದಸ್ಯರನ್ನು ಹೊಂದಿದ್ದರೆ, ಕಾಂಗ್ರೆಸ್ 29 ಮತ್ತು ಜೆಡಿಎಸ್ 13 ಸ್ಥಾನಗಳನ್ನು ಹೊಂದಿದೆ. ವಿಧಾನಸಭೆಯಲ್ಲಿ ಪೂರ್ಣ ಬಹುಮತ ಹೊಂದಿದ್ದರೂ, ಬಿಜೆಪಿಗೆ ಪರಿಷತ್ತಿನ ಪೂರ್ಣ ಬಹುಮತ ಇಲ್ಲ. ಹೀಗಾಗಿ ವಿವಾದಿತ ಮಸೂದೆಗಳನ್ನು ಬಿಜೆಪಿ ಸರಕಾರಕ್ಕೆ ಪರಿಷತ್ತಿನಲ್ಲಿ ಪಾಸ್ ಮಾಡಲು ಸಾಧ್ಯವಾಗದ ಸ್ಥಿತಿಯಿದೆ. ಇದಕ್ಕಾಗಿಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಕೆಲವು ಮಸೂದೆಗಳನ್ನು ಪರಿಷತ್ತಿನಲ್ಲಿ ಅಂಗೀಕಾರ ಪಡೆಯಲು ತಂತ್ರ ಹೂಡಿದೆ.

ಈ ಹಿಂದೆ ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. ಧರ್ಮೇಗೌಡರಿಗೆ ಉಪ ಸಭಾಪತಿ ಸ್ಥಾನ ನೀಡಲಾಗಿದೆ. ಈಗ ಜೆಡಿಎಸ್ ಆಡಳಿತಾರೂಢ ಬಿಜೆಪಿಯ ಸಖ್ಯ ಬೆಳೆಸಿರುವುದರಿಂದ ಬಿಜೆಪಿಗೆ ಪರಿಷತ್ತಿನಲ್ಲಿ ಬಲ ಬಂದಿದೆ. ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಹೇಳಿದ್ದು, ಈ ಬಗ್ಗೆ ಎರಡೂ ಪಕ್ಷದ ಮುಖಂಡರು ಕುಳಿತು ನಿರ್ಧಾರಕ್ಕೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಉಪ ಸಭಾಪತಿಯಾಗುವುದು ಖಚಿತ ಎನ್ನಲಾಗುತ್ತಿದೆ.
ಉಪ ಸಭಾಪತಿ ಸ್ಥಾನ ತುಂಬಿದ ಬಳಿಕ ಅವಿಶ್ವಾಸ ವಿಚಾರ ಚರ್ಚೆಗೆ ಬರಲಿದ್ದು, ಸಭಾಪತಿ ಸ್ಥಾನದಿಂದ ಪ್ರತಾಪರನ್ನು ಕೆಳಗಿಳಿಸಿ ಹೊರಟ್ಟಿಯನ್ನು ಆ ಸ್ಥಾನಕ್ಕೆ ತರುವ ಪ್ಲಾನ್ ಇದೆ. ಹಾಗಾದಲ್ಲಿ ಜೆಡಿಎಸ್ ಅಭ್ಯರ್ಥಿ ಮೊದಲ ಬಾರಿಗೆ ಪರಿಷತ್ತಿನ ಸಭಾಪತಿ ಸ್ಥಾನ ಅಲಂಕರಿಸಿದಂತಾಗಲಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm