ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm