ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm