ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am