ಬ್ರೇಕಿಂಗ್ ನ್ಯೂಸ್
07-02-21 12:25 pm Mangaluru Correspondent ಕರ್ನಾಟಕ
ಶಿವಮೊಗ್ಗ, ಫೆಬ್ರವರಿ 7: ಆಗುಂಬೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ಪ್ರವಾಸಿಗರು ಆಹಾರ ಎಸೆಯುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡಿದವರೆ ಅರಣ್ಯ ಇಲಾಖೆ ದಂಡ ಹಾಕುತ್ತದೆ. ಈಗಾಗಲೇ ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುಂಬೆ ಘಾಟ್ ರಸ್ತೆ ಹಾದು ಹೋಗುತ್ತದೆ. ಶಿವಮೊಗ್ಗ ಮತ್ತು ಕರಾವಳಿ ಭಾಗವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಾರೆ.

ಶನಿವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ದಂಡ ಪ್ರಯೋಗದ ಕಾರ್ಯಾರಣೆಯನ್ನು ಆರಂಭಿಸಿದ್ದಾರೆ. ಸೋಮೇಶ್ವರದಿಂದ ಆಗುಂಬೆ ತನಕ ಹೆಬ್ರಿ, ಕಾರ್ಕಳ, ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 40 ಸಿಬ್ಬಂದಿಗಳು ಪ್ರಾಣಿಗಳಿಗೆ ಆಹಾರ ಹಾಕುವವರು, ಪ್ಲಾಸ್ಟಿಕ್ ತ್ಯಾಜ್ಯ ಬಿಸಾಡುವವರಿಗೆ ದಂಡ ಹಾಕಿದ್ದಾರೆ.
ನಿಯಮ ಉಲ್ಲಂಘನೆ ಆಧಾರದ ಮೇಲೆ 50 ರೂ. ನಿಂದ 200 ರೂ. ವರೆಗೆ ದಂಡ ಹಾಕಲಾಗಿದೆ. ದಂದಡ ಜೊತೆಗೆ ಘಾಟ್ ರಸ್ತೆಯ ಹಲವು ಕಡೆ ಮಾಹಿತಿ ಫಲಕಗಳನ್ನು ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮನುಷ್ಯರು ಸೇವಿಸುವ ಆಹಾರ ಮತ್ತು ಜಂಡ್ ಫುಡ್ಗಳನ್ನು ಪ್ರಾಣಿಗಳಿಗೆ ನೀಡಿದರೆ ಅವುಗಳ ಆರೋಗ್ಯ ಹಾಳಾಗಲಿದೆ. ಮನುಷ್ಯರು ಹಾಕುವ ಆಹಾರಕ್ಕೆ ಹೊಂದಿಕೊಂಡು ಪ್ರಾಣಿಗಳು ರಸ್ತೆ ಬದಿಯಲ್ಲಿಯೇ ನಿಂತು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇದೆ.
ಪ್ರಾಣಿಗಳಿಂದ ಮನುಷ್ಯರಿಗೆ ರೋಗ ಹಡುವು ಸಾಧ್ಯತೆಯೂ ಇದೆ. ಆದ್ದರಿಂದ, ವಾಹನ ಸವಾರರು ಘಾಟ್ ರಸ್ತೆಯಲ್ಲಿ ಪ್ರಾಣಿಗಳಿಗೆ ಆಹಾರ ನೀಡದಂತೆ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಎಸೆದರೆ ದಂಡವನ್ನು ಹಾಕಲಾಗುತ್ತಿದೆ.
The forest officials will now impose fines on those that feed animals at agumbe ghat.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm