ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
ಪಾಂಡೇಶ್ವರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಬಾಗಲ...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm