ಬ್ರೇಕಿಂಗ್ ನ್ಯೂಸ್
13-02-21 01:14 pm Headline Karnataka News Network ಕರ್ನಾಟಕ
ಹಾಸನ, ಫೆ.13: ಕಾರೊಂದು ನಿಲ್ಲಿಸಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದ ಪರಿಣಾಮ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್, ಮಂಜುನಾಥ್, ವಿಕ್ರಂ ಹಾಗೂ ಚೇತನ್ ಎಂದು ಗುರುತಿಸಲಾಗಿದೆ. ಮೃತಪಟ್ಟವರೆಲ್ಲರೂ 25ರಿಂದ 30ರ ವಯಸ್ಸಿನೊಳಗಿನವರಾಗಿದ್ದಾರೆ.
ಮೃತರ ಪೈಕಿ ಚೇತನ್ ಅಬಕಾರಿ ಸಬ್ ಇನ್ ಸ್ಪೆಕ್ಟರ್ ಆಗಿ ಇತ್ತೀಚೆಗೆ ನೇಮಕಗೊಂಡಿದ್ದರು. ಅಭಿಷೇಕ್, ಮಂಜುನಾಥ್, ವಿಕ್ರಂ ಐಟಿ ಉದ್ಯೋಗಿಗಳಾಗಿದ್ದರು.
ಚೇತನ್ ಡ್ಯೂಟಿ ರಿಪೋರ್ಟ್ ಮಾಡಲೆಂದು ಉಳಿದ ಮೂವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಚನ್ನರಾಯಪಟ್ಟಣ ಸರಕಾರಿ ಶವಾಗಾರದಲ್ಲಿರಿಸಲಾಗಿದೆ.
ಈ ಬಗ್ಗೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹಿನ್ನೆಲೆ ಚನ್ನರಾಯಪಟ್ಟಣ ಸರಕಾರಿ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿದರು.
Four youngsters died after the car in which they were travelling rammed into a stationary container at Channarayapatna in the district in the early hours on Saturday, February 13.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm