ಬ್ರೇಕಿಂಗ್ ನ್ಯೂಸ್
13-02-21 01:14 pm Headline Karnataka News Network ಕರ್ನಾಟಕ
ಹಾಸನ, ಫೆ.13: ಕಾರೊಂದು ನಿಲ್ಲಿಸಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದ ಪರಿಣಾಮ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್, ಮಂಜುನಾಥ್, ವಿಕ್ರಂ ಹಾಗೂ ಚೇತನ್ ಎಂದು ಗುರುತಿಸಲಾಗಿದೆ. ಮೃತಪಟ್ಟವರೆಲ್ಲರೂ 25ರಿಂದ 30ರ ವಯಸ್ಸಿನೊಳಗಿನವರಾಗಿದ್ದಾರೆ.
ಮೃತರ ಪೈಕಿ ಚೇತನ್ ಅಬಕಾರಿ ಸಬ್ ಇನ್ ಸ್ಪೆಕ್ಟರ್ ಆಗಿ ಇತ್ತೀಚೆಗೆ ನೇಮಕಗೊಂಡಿದ್ದರು. ಅಭಿಷೇಕ್, ಮಂಜುನಾಥ್, ವಿಕ್ರಂ ಐಟಿ ಉದ್ಯೋಗಿಗಳಾಗಿದ್ದರು.
ಚೇತನ್ ಡ್ಯೂಟಿ ರಿಪೋರ್ಟ್ ಮಾಡಲೆಂದು ಉಳಿದ ಮೂವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಚನ್ನರಾಯಪಟ್ಟಣ ಸರಕಾರಿ ಶವಾಗಾರದಲ್ಲಿರಿಸಲಾಗಿದೆ.
ಈ ಬಗ್ಗೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹಿನ್ನೆಲೆ ಚನ್ನರಾಯಪಟ್ಟಣ ಸರಕಾರಿ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿದರು.
Four youngsters died after the car in which they were travelling rammed into a stationary container at Channarayapatna in the district in the early hours on Saturday, February 13.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm