ಬ್ರೇಕಿಂಗ್ ನ್ಯೂಸ್
14-02-21 05:29 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.14: ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲಾ ಹಿಂದು, ನಾವೆಲ್ಲ ಒಂದು ಎಂದು ಹಿಂದು ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ, ಯಾರಾದರೂ ಉತ್ತರಿಸುವಿರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಪ್ರೇರಿತ ಜಾತಿ ಸಮಾವೇಶಗಳ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ಮೀಸಲಾತಿ ಹೆಚ್ಚಳಕ್ಕಾಗಿ ಆಗ್ರಹಿಸುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರಕಾರ ಮೀಸಲಾತಿ ಪರವಾಗಿದ್ದರೆ, ಈ ಮೊದಲು ಕಾಂಗ್ರೆಸ್ ಸರಕಾರ ಇದ್ದಾಗ ನಡೆಸಿದ್ದ ಜಾತಿ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಟಾನಗೊಳಿಸಬೇಕು ಎಂದಿದ್ದಾರೆ.
ಈಗಿನ ಮೀಸಲಾತಿ ಬದಲಾವಣೆ, ಹೆಚ್ಚಳದ ಹೋರಾಟದ ಬೇಡಿಕೆಗೆ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇ.73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರಕಾರ ಮಾಡಿರುವ ಕಾನೂನು ಪರಿಹಾರ. ಅದರ ಅನುಷ್ಠಾನ ಕೇಂದ್ರ ಸರಕಾರದ ಕೈಯಲ್ಲಿದೆ ? ರಾಜ್ಯದಲ್ಲಿ ಮೀಸಲಾತಿಗಾಗಿ ರಾಜ್ಯ ಸರಕಾರದವರೇ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಯಾರ ವಿರುದ್ಧ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವೇ ಇರುವಾಗ ಹೋರಾಟದ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.
ಮೀಸಲಾತಿಯನ್ನು ನೇರವಾಗಿ ವಿರೋಧಿಸಲಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಅಮಾಯಕ ಜನತೆ ಈ ಮೋಸಕ್ಕೆ ಬಲಿಯಾಗಬಾರದು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡವರು ಯಾರು..? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳ ಮೀಸಲಾತಿಯನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದ ಬಿಜೆಪಿಯವರು ಈಗ ಮೀಸಲಿಗಾಗಿ ಹೋರಾಟ ನಡೆಸುತ್ತಿರುವುದು ಪ್ರಾಮಾಣಿಕ ಜ್ಞಾನೋದಯವೇ ಅಥವಾ ಮೀಸಲು ಹೋರಾಟವನ್ನು ದಿಕ್ಕು ತಪ್ಪಿಸುವ ಯತ್ನವೇ ಎಂದು ಕರ್ನಾಟಕದ ಬಿಜೆಪಿಯನ್ನು ಗುರಿಯಾಗಿರಿಸಿ ಕಟಕಿಯಾಡಿದ್ದಾರೆ.
ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ @BJP4India ಕೈಯಲ್ಲಿದೆ. 6/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
'ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ @narendramodi, ಇಲ್ಲಿನ ಮುಖ್ಯಮಂತ್ರಿ @BSYBJP. 5/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು. 4/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ? 3/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
Ex cm Siddaramayya slams BJP leaders and cm Yeddyurappa on caste reservation issues in tweets
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm