ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm