ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am