ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm