ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm