ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am