ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm