ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am