ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm