ಬ್ರೇಕಿಂಗ್ ನ್ಯೂಸ್
17-02-21 12:53 pm Mangaluru Correspondent ಕರ್ನಾಟಕ
ಬೆಂಗಳೂರು, ಫೆ.17: ರಾಜ್ಯದಲ್ಲಿ ಮಂಗಳೂರು, ದಾವಣಗೆರೆ, ಬೆಂಗಳೂರು ಮತ್ತು ತುಮಕೂರಿನಲ್ಲಿ ಹತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜು ಮಾಲೀಕರನ್ನು ಗುರಿಯಾಗಿರಿಸಿ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಗೋವಾ, ಬೆಳಗಾವಿ, ಬೆಂಗಳೂರಿನ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು , ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರಿಗೆ ಸೇರಿದ ಜೆಜೆಎಂ ಮತ್ತು ಎಸ್ ಎಸ್ ಕಾಲೇಜಿಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಪ್ರತಿಷ್ಠಿತ ಎಜೆ ಶೆಟ್ಟಿ ಮೆಡಿಕಲ್ ಕಾಲೇಜು, ಯೇನಪೋಯ ಮೆಡಿಕಲ್ ಕಾಲೇಜು, ಕಣಚೂರು ಮೆಡಿಕಲ್ ಕಾಲೇಜು, ಶ್ರೀನಿವಾಸ ಮೆಡಿಕಲ್ ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.




ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಸಪ್ತಗಿರಿ ಕಾಲೇಜಿನ ಮುಖ್ಯಸ್ಥ ದಯಾನಂದ ಮನೆ ಮತ್ತು ಕಚೇರಿಗೂ ದಾಳಿ ನಡೆಸಲಾಗಿದೆ. ಆಕಾಶ್ ಆಸ್ಪತ್ರೆ ಮತ್ತು ಅದರ ಮಾಲೀಕರ ಮನೆಗೂ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ನಲ್ಲಿರುವ ಶ್ರೀದೇವಿ ಮೆಡಿಕಲ್ ಕಾಲೇಜಿಗೂ ದಾಳಿ ನಡೆದಿದೆ. ಬಿಜೆಪಿ ನಾಯಕ ಹುಲಿನಾಯ್ಕರ್ ಅವರಿಗೆ ಸೇರಿದ ಕಾಲೇಜು ಇದಾಗಿದ್ದು, ಗೋವಾ ಮತ್ತು ಬೆಳಗಾವಿ ಮೂಲದ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನೇತೃತ್ವ ವಹಿಸಿದ್ದಾರೆ.
ಮೆಡಿಕಲ್ ಕಾಲೇಜುಗಳ ಮೂಲಕ ಐಟಿ ತೆರಿಗೆ ವಂಚನೆ, ದಾಖಲೆಗಳಲ್ಲಿ ಅಪರಾತಪರಾ ಮಾಡಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
Income Tax department raids several Medical colleges and their owner's residence and properties in Bangalore, Tumkur, Davanagere and Mangalore in Karnataka.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm