ಬ್ರೇಕಿಂಗ್ ನ್ಯೂಸ್
20-02-21 04:56 pm Headline Karnataka News Network ಕರ್ನಾಟಕ
ಗದಗ, ಫೆ.20: ಹಿಂದುಗಳೆಲ್ಲರು ತಮ್ಮ ಮನೆ ಎದುರಲ್ಲಿ ಖಡ್ಗ ನೇತಾಡಿಸಿ ಇಡಬೇಕು. ಹರಿತವಾದ ಕತ್ತಿ, ಖಡ್ಗ, ಭರ್ಚಿ, ಕುಡಗೋಲು, ಚಾಕು ಮನೆಯಲ್ಲಿ ನೇತು ಬಿಡ್ರಿ.. ಎದುರಲ್ಲೇ ಕಾಣುವಂತೆ ಇಡಿ, ಕದ್ದು ಮುಚ್ಚಿ ಇಟ್ಟುಕೊಳ್ಳುವುದಲ್ಲ. ಅತ್ಯಾಚಾರಿ, ಮತಾಂತರಿ, ಗೋ ಹಂತಕ, ಭಯೋತ್ಪಾದಕ, ದುರುಳ, ದುಷ್ಟರನ್ನು ಸದೆಬಡಿಯಲು ಈ ಕತ್ತಿ ಮುಂದೆ ಉಪಯೋಗಕ್ಕೆ ಬರಬಹುದು.. ಹೀಗೆಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ವರಿಷ್ಠ ಪ್ರಮೋದ್ ಮುತಾಲಿಕ್ ಹಿಂದುಗಳಿಗೆ ಕರೆ ಕೊಟ್ಟಿದ್ದಾರೆ.
ಗದಗ ಜಿಲ್ಲೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಶಿವಾಜಿ ಮಹಾರಾಜರ ಜಯಂತಿ ಸಮಾವೇಶದಲ್ಲಿ ಮುತಾಲಿಕ್ ನಾಲಿಗೆ ಹರಿಯ ಬಿಟ್ಟಿದ್ದಾರೆ. ಶಿವಾಜಿ ಮಹಾರಾಜರ ಫೋಟೋ, ಚರಿತ್ರೆ ಪುಸ್ತಕ, ಖಡ್ಗ ಹಿಂದುಗಳೆಲ್ಲರ ಮನೆಯಲ್ಲೂ ಇಟ್ಟುಕೊಳ್ಳಿ. ಖಡ್ಗ ಕದ್ದುಮುಚ್ಚಿ ಇಡಬೇಡ್ರಿ, ಮನೆಯೊಳಗೆ ಹೋಗುತ್ತಿದ್ದಂತೆ ಕಾಣುವಂತಿಡಿ. ಹರಿತವಾದ ಖತ್ತಿ, ಖಡ್ಗ, ಭಾಚಿ, ಭರ್ಚಿ, ಕುಡಗೋಲು, ಚಾಕು ಮನೆಯಲ್ಲಿ ನೇತು ಬಿಡ್ರಿ ಅಂತ ಪ್ರಚೋದನೆಕಾರಿ ಮಾತುಗಳನ್ನಾಡಿದ್ದಾರೆ.

ಆಯುಧ ಪೂಜೆ ನಮ್ಮ ಸಂಸ್ಕೃತಿ. ಈ ಹಬ್ಬಕ್ಕೆ ಅವಮಾನ ಮಾಡಬೇಡಿ. ಹೇಡಿಗಳಾಗಬೇಡಿ, ದುರ್ಗಾ ಮಾತೆಯ ಹತ್ತು ಕೈಗಳಲ್ಲಿ ಹತ್ತು ಶಸ್ತ್ರಗಳಿವೆ. ದುಷ್ಟ, ನೀಚ, ಭ್ರಷ್ಟ, ಭಯೋತ್ಪಾದಕ, ಗೋ ಹಂತಕ, ಮತಾಂತರರನ್ನು ಕತ್ತರಿಸಲೆಂದೇ ದೇವಿ ಕೈನಲ್ಲಿ ಶಸ್ತ್ರಗಳಿವೆ. ಹಾಗೆಯೇ ಪ್ರತಿ ಹಿಂದುವಿನ ಮನೆಯಲ್ಲೂ ಈ ರೀತಿ ಕತ್ತಿ ಹಿಡಿದುಕೊಳ್ಳಬೇಕು. ಆದರೆ, ಕತ್ತಿಯನ್ನು ಕುಡಿದು ಹೊಡೆದಾಡಲು ಉಪಯೋಗಿಸಬೇಡಿ. ಬದಲಾಗಿ ದೇಶದ, ಗೋ ಮಾತೆ ಹಿತಕ್ಕೋಸ್ಕರ ಇಂದೆಲ್ಲಾ ನಾಳೆ ಬರುವ ಬೀದಿ ಕಾಳಗಕ್ಕೆ ಖಡ್ಗ ಹೊರ ತೆಗೆಯಿರಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶ್ರೀರಾಮ ನಿಧಿ ಸಂಗ್ರಹಣೆ ವೇಳೆ ಮುಸ್ಲಿಮರು ಬಂದು ರಥಯಾತ್ರೆ ತಡೀತಾರೆ. ಮುಸ್ಲಿಂ ಗೂಂಡಾಗಳು ಹಿಂದೂ ಕಾರ್ಯಕರ್ತರಿಗೆ ಹೊಡೆದು ಗಾಯಮಾಡಿ ರಾಮನ ಭಾವಚಿತ್ರ ಹರಿದು ಹಾಕಿ ಗಲಭೆ ಮಾಡ್ತಾರೆ. ದೆಹಲಿಯಲ್ಲಿ ರಿಂಗೋ ಶರ್ಮಾನ ಕೊಂದ ಮುಸ್ಲಿಮರೇ, ಬೆಂಗಳೂರಿನಲ್ಲಿ ರಾಮನ ರಥಯಾತ್ರೆ ತಡೆದ ಬೊಸುಡಿಕೆಗಳೇ... ಇದು ನಮ್ಮ ಜಾಗ ಅಂತಿರಲ್ಲಾ, ಇದು ನಿಮ್ಮಪ್ಪನ ಜಾಗವೂ ಅಲ್ಲಾ.. ಅಕ್ಬರ್, ಔರಂಗಜೇಬನ ಜಾಗವೂ ಅಲ್ಲಾ... ನಿಮ್ಮ ಜಾಗ ಪಾಕಿಸ್ತಾನ್, ಅಫ್ಘಾನಿಸ್ತಾನ್, ಇರಾನ್, ಇರಾಕ್ ನಲ್ಲಿದೆ ಎಂದು ಹೇಳಿದ ಮುತಾಲಿಕ್, ಶ್ರೀರಾಮ ಸೇನೆಯ ಕಾರ್ಯಕರ್ತರು ಇಂದಲ್ಲಾ ನಾಳೆ ಅದೇ ಬೀದಿಯಲ್ಲಿ ಹೊಕ್ಕು ಮೆರವಣಿಗೆ ಮಾಡುತ್ತೇವೆ ಅಂತ ಆಕ್ರೋಶದ ಮಾತುಗಳನ್ನಾಡಿದರು. ಕ್ರಿಶ್ಚಿಯನ್ನರೇ ಮುಂದೆ ಮತಾಂತರಕ್ಕೆ ಮುಂದಾದ್ರೆ ಒದೆ ಬೀಳುತ್ತವೆ ಹುಷಾರ್..! ಅಂತ ಎಚ್ಚರಿಕೆ ನೀಡಿದರು.
Video:
Hindu Sena Chief Pramod Muthalik warns Hindu homes to Keep Sharped Swords, leathen weapons for safeguard. He gave a provocative speech at Gadag.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am