ಬ್ರೇಕಿಂಗ್ ನ್ಯೂಸ್
20-02-21 04:56 pm Headline Karnataka News Network ಕರ್ನಾಟಕ
ಗದಗ, ಫೆ.20: ಹಿಂದುಗಳೆಲ್ಲರು ತಮ್ಮ ಮನೆ ಎದುರಲ್ಲಿ ಖಡ್ಗ ನೇತಾಡಿಸಿ ಇಡಬೇಕು. ಹರಿತವಾದ ಕತ್ತಿ, ಖಡ್ಗ, ಭರ್ಚಿ, ಕುಡಗೋಲು, ಚಾಕು ಮನೆಯಲ್ಲಿ ನೇತು ಬಿಡ್ರಿ.. ಎದುರಲ್ಲೇ ಕಾಣುವಂತೆ ಇಡಿ, ಕದ್ದು ಮುಚ್ಚಿ ಇಟ್ಟುಕೊಳ್ಳುವುದಲ್ಲ. ಅತ್ಯಾಚಾರಿ, ಮತಾಂತರಿ, ಗೋ ಹಂತಕ, ಭಯೋತ್ಪಾದಕ, ದುರುಳ, ದುಷ್ಟರನ್ನು ಸದೆಬಡಿಯಲು ಈ ಕತ್ತಿ ಮುಂದೆ ಉಪಯೋಗಕ್ಕೆ ಬರಬಹುದು.. ಹೀಗೆಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ವರಿಷ್ಠ ಪ್ರಮೋದ್ ಮುತಾಲಿಕ್ ಹಿಂದುಗಳಿಗೆ ಕರೆ ಕೊಟ್ಟಿದ್ದಾರೆ.
ಗದಗ ಜಿಲ್ಲೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಶಿವಾಜಿ ಮಹಾರಾಜರ ಜಯಂತಿ ಸಮಾವೇಶದಲ್ಲಿ ಮುತಾಲಿಕ್ ನಾಲಿಗೆ ಹರಿಯ ಬಿಟ್ಟಿದ್ದಾರೆ. ಶಿವಾಜಿ ಮಹಾರಾಜರ ಫೋಟೋ, ಚರಿತ್ರೆ ಪುಸ್ತಕ, ಖಡ್ಗ ಹಿಂದುಗಳೆಲ್ಲರ ಮನೆಯಲ್ಲೂ ಇಟ್ಟುಕೊಳ್ಳಿ. ಖಡ್ಗ ಕದ್ದುಮುಚ್ಚಿ ಇಡಬೇಡ್ರಿ, ಮನೆಯೊಳಗೆ ಹೋಗುತ್ತಿದ್ದಂತೆ ಕಾಣುವಂತಿಡಿ. ಹರಿತವಾದ ಖತ್ತಿ, ಖಡ್ಗ, ಭಾಚಿ, ಭರ್ಚಿ, ಕುಡಗೋಲು, ಚಾಕು ಮನೆಯಲ್ಲಿ ನೇತು ಬಿಡ್ರಿ ಅಂತ ಪ್ರಚೋದನೆಕಾರಿ ಮಾತುಗಳನ್ನಾಡಿದ್ದಾರೆ.
ಆಯುಧ ಪೂಜೆ ನಮ್ಮ ಸಂಸ್ಕೃತಿ. ಈ ಹಬ್ಬಕ್ಕೆ ಅವಮಾನ ಮಾಡಬೇಡಿ. ಹೇಡಿಗಳಾಗಬೇಡಿ, ದುರ್ಗಾ ಮಾತೆಯ ಹತ್ತು ಕೈಗಳಲ್ಲಿ ಹತ್ತು ಶಸ್ತ್ರಗಳಿವೆ. ದುಷ್ಟ, ನೀಚ, ಭ್ರಷ್ಟ, ಭಯೋತ್ಪಾದಕ, ಗೋ ಹಂತಕ, ಮತಾಂತರರನ್ನು ಕತ್ತರಿಸಲೆಂದೇ ದೇವಿ ಕೈನಲ್ಲಿ ಶಸ್ತ್ರಗಳಿವೆ. ಹಾಗೆಯೇ ಪ್ರತಿ ಹಿಂದುವಿನ ಮನೆಯಲ್ಲೂ ಈ ರೀತಿ ಕತ್ತಿ ಹಿಡಿದುಕೊಳ್ಳಬೇಕು. ಆದರೆ, ಕತ್ತಿಯನ್ನು ಕುಡಿದು ಹೊಡೆದಾಡಲು ಉಪಯೋಗಿಸಬೇಡಿ. ಬದಲಾಗಿ ದೇಶದ, ಗೋ ಮಾತೆ ಹಿತಕ್ಕೋಸ್ಕರ ಇಂದೆಲ್ಲಾ ನಾಳೆ ಬರುವ ಬೀದಿ ಕಾಳಗಕ್ಕೆ ಖಡ್ಗ ಹೊರ ತೆಗೆಯಿರಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶ್ರೀರಾಮ ನಿಧಿ ಸಂಗ್ರಹಣೆ ವೇಳೆ ಮುಸ್ಲಿಮರು ಬಂದು ರಥಯಾತ್ರೆ ತಡೀತಾರೆ. ಮುಸ್ಲಿಂ ಗೂಂಡಾಗಳು ಹಿಂದೂ ಕಾರ್ಯಕರ್ತರಿಗೆ ಹೊಡೆದು ಗಾಯಮಾಡಿ ರಾಮನ ಭಾವಚಿತ್ರ ಹರಿದು ಹಾಕಿ ಗಲಭೆ ಮಾಡ್ತಾರೆ. ದೆಹಲಿಯಲ್ಲಿ ರಿಂಗೋ ಶರ್ಮಾನ ಕೊಂದ ಮುಸ್ಲಿಮರೇ, ಬೆಂಗಳೂರಿನಲ್ಲಿ ರಾಮನ ರಥಯಾತ್ರೆ ತಡೆದ ಬೊಸುಡಿಕೆಗಳೇ... ಇದು ನಮ್ಮ ಜಾಗ ಅಂತಿರಲ್ಲಾ, ಇದು ನಿಮ್ಮಪ್ಪನ ಜಾಗವೂ ಅಲ್ಲಾ.. ಅಕ್ಬರ್, ಔರಂಗಜೇಬನ ಜಾಗವೂ ಅಲ್ಲಾ... ನಿಮ್ಮ ಜಾಗ ಪಾಕಿಸ್ತಾನ್, ಅಫ್ಘಾನಿಸ್ತಾನ್, ಇರಾನ್, ಇರಾಕ್ ನಲ್ಲಿದೆ ಎಂದು ಹೇಳಿದ ಮುತಾಲಿಕ್, ಶ್ರೀರಾಮ ಸೇನೆಯ ಕಾರ್ಯಕರ್ತರು ಇಂದಲ್ಲಾ ನಾಳೆ ಅದೇ ಬೀದಿಯಲ್ಲಿ ಹೊಕ್ಕು ಮೆರವಣಿಗೆ ಮಾಡುತ್ತೇವೆ ಅಂತ ಆಕ್ರೋಶದ ಮಾತುಗಳನ್ನಾಡಿದರು. ಕ್ರಿಶ್ಚಿಯನ್ನರೇ ಮುಂದೆ ಮತಾಂತರಕ್ಕೆ ಮುಂದಾದ್ರೆ ಒದೆ ಬೀಳುತ್ತವೆ ಹುಷಾರ್..! ಅಂತ ಎಚ್ಚರಿಕೆ ನೀಡಿದರು.
Video:
Hindu Sena Chief Pramod Muthalik warns Hindu homes to Keep Sharped Swords, leathen weapons for safeguard. He gave a provocative speech at Gadag.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm