ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm