ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm