ಬ್ರೇಕಿಂಗ್ ನ್ಯೂಸ್
21-02-21 03:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಡೆಕ್ಕನ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತದಲ್ಲಿ ಅವ್ಯವಹಾರ, ಒಟ್ಟು ಆರ್ಥಿಕ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅದರ ಎಲ್ಲ ರೀತಿಯ ವಹಿವಾಟುಗಳನ್ನು ನಿರ್ಬಂಧಿಸಿ ಆರ್ ಬಿಐ ಆದೇಶ ಹೊರಡಿಸಿದೆ. ಇದರಿಂದ ಯಾವುದೇ ರೀತಿಯ ಹೊಸ ಸಾಲ ನೀಡುವಂತಿಲ್ಲ ಹಾಗು ಡಿಪಾಸಿಟ್ ಹಣವನ್ನೂ ಪಡೆಯುವ ಹಾಗಿಲ್ಲ.
ಈ ನಡುವೆ, ಇನ್ನು ಆರು ತಿಂಗಳ ಅವಧಿಯಲ್ಲಿ ಗ್ರಾಹಕರು ಕೇವಲ ರೂ.1000 ಮಾತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಆದರೆ, ಈ ಆರು ತಿಂಗಳಲ್ಲಿ ಗ್ರಾಹಕರ ಹಣಕ್ಕೆ ಸಂಪೂರ್ಣ ಬಡ್ಡಿ ಪಾವತಿಸಲಾಗುವುದು ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಇನ್ನೊಂದೆಡೆ ಗ್ರಾಹಕರು ತಮ್ಮ ಸಾಲ ತೀರಿಸಲು ಬ್ಯಾಂಕ್ ನಲ್ಲಿರುವ ಹಣವನ್ನು ಬಳಕೆ ಮಾಡಬಹುದು ಎಂದು RBI ಹೇಳಿದೆ. ಆದರೆ ಇದಕ್ಕೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ.

ಗ್ರಾಹಕರು ಆತಂಕ ಪಡಬೇಕಿಲ್ಲ
ಡೆಕ್ಕನ್ ಸಹಕಾರಿ ಬ್ಯಾಂಕಿನಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಅಂದರೆ ಫೆಬ್ರುವರಿ 19, 2021 ರಿಂದ ಮುಂದಿನ ಆರು ತಿಂಗಳ ಕಾಲ ಎಲ್ಲ ರೀತಿಯ ವ್ಯವಹಾರಗಳಿಗೆ ತಡೆ ಇರಲಿದೆ. ಆದರೆ ಈ ತಡೆಯ ಅರ್ಥ ಬ್ಯಾಂಕಿನ ಲೈಸನ್ಸ್ ರದ್ದುಗೊಳಿಸಲಾಗಿದೆ ಎಂದು ಭಾವಿಸಬಾರದು ಎಂದು ಆರ್.ಬಿ.ಐ ಸ್ಪಷ್ಟಪಡಿಸಿದೆ. ನಿರ್ಬಂಧಗಳನ್ನು ಪಾಲಿಸಿ ಬ್ಯಾಂಕ್ ಎಂದಿನಂತೆ ತನ್ನ ಕೆಲಸ ಮುಂದುವರೆಸಲಿದೆ. ಈ ಆರು ತಿಂಗಳ ನಿರ್ಬಂಧ ಬಳಿಕ ಪುನಃ ಬ್ಯಾಂಕ್ ಸಮೀಕ್ಷೆ ನಡೆಸಲಾಗುವುದು. ಆದರೆ, ಕೆಲಸದ ಮೇಲಿನ ಬ್ಯಾನ್ ಹೊರತಾಗಿಯೂ ಶೇ.99 ರಷ್ಟು ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು RBI ಹೇಳಿದೆ.
ಇದೆ ವೇಳೆ ಗ್ರಾಹಕರಿಗೆ 'ಉಳಿತಾಯ ವಿಮಾ ಹಾಗೂ ಸಾಲ ಗ್ಯಾರಂಟಿ ನಿಗಮ'ದ ವತಿಯಿಂದ ಉಳಿತಾಯದ ಮೇಲೆ ಸಿಗುವ ವಿಮಾ ಲಾಭ ನೀಡಲಾಗುವುದು. ಈ ವಿಮೆಯ ಅಡಿ ಬ್ಯಾಂಕ್ ನಲ್ಲಿ ಗ್ರಾಹಕರು ಮಾಡಿರುವ ಉಳಿತಾಯದ ಮೇಲೆ 5 ಲಕ್ಷ ರೂ.ವಿಮಾ ಕವರೇಜ್ ಸಿಗಲಿದೆ.
The Reserve Bank of India (RBI) has imposed a withdrawal cap of Rs 1,000 on customers of the Deccan Urban Co-operative Bank and has barred the lender from granting new loans or accepting deposits due to its liquidity position.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm