ಬ್ರೇಕಿಂಗ್ ನ್ಯೂಸ್
23-02-21 12:12 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.23: ಶಿವಮೊಗ್ಗದ ಗಣಿ ದುರಂತ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ದುರಂತ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಆರೋಗ್ಯ ಸಚಿವ ಸುಧಾಕರ್ ಅವರ ಊರಲ್ಲೇ ಘಟನೆ ನಡೆದಿದ್ದು, ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿ ಎನ್ನುವ ಗ್ರಾಮದಲ್ಲಿ ಕಲ್ಲು ಕ್ವಾರಿಯಲ್ಲಿ ನಿನ್ನೆ ಮಧ್ಯರಾತ್ರಿ ಜಿಲೆಟಿನ್ ಸ್ಫೋಟಗೊಂಡಿದ್ದು ಆರು ಮಂದಿ ಸಾವು ಕಂಡಿದ್ದಾರೆ.


ಸ್ಫೋಟದ ತೀವ್ರತೆಗೆ ಮೃತದೇಹಗಳು ನೂರಾರು ಮೀಟರ್ ದೂರಕ್ಕೆ ಛಿದ್ರವಾಗಿ ಬಿದ್ದಿವೆ. ಮೃತರನ್ನು ಉಮಾಕಾಂತ್ ( ಇಂಜಿನಿಯರ್), ರಾಮು (ಸೂಪರ್ ವೈಸರ್), ಮಹೇಶ್ (ವಾಚ್ ಮನ್), ಗಂಗಾಧರ್ ಮತ್ತು ಮುರುಳಿ ಎಂದು ಗುರುತಿಸಲಾಗಿದೆ. ಟಾಟಾ ಏಸ್ ಚಾಲಕ ರಿಯಾಸ್ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಎಡಿಜಿಪಿ ಪ್ರತಾಪ ರೆಡ್ಡಿ, ಜಿಲ್ಲಾಧಿಕಾರಿ, ಎಸ್ಪಿ ದರ್ಜೆಯ ಅಧಿಕಾರಿಗಳು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಆಂಧ್ರ ಪ್ರದೇಶ ಮೂಲದ ರಾಘವೇಂದ್ರ ರೆಡ್ಡಿ, ಶಿವಾರೆಡ್ಡಿ ಮತ್ತು ಗುಡಿಬಂಡೆ ತಾಲೂಕಿನ ನಾಗರಾಜ್ ರೆಡ್ಡಿ ಕಲ್ಲು ಕೋರೆಟ ಮಾಲೀಕರಾಗಿದ್ದು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭ್ರಮರವಾಸಿನಿ ಕ್ರಶರ್ ನಿಂದ ಒಂದು ಕಿಮೀ ದೂರದ ಅರಣ್ಯ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ ಜಿಲೆಟಿನ್ ಕಡ್ಡಿ ಹಾಗೂ ಇಲೆಕ್ಟ್ರಿಕ್ ಡಿಟೋನೇಟರ್ಸ್ ಗಳನ್ನು ತರುವ ಪ್ರಯತ್ನದಲ್ಲಿದ್ದಾಗ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ. ಇದೇ ವೇಳೆ, ಸ್ಥಳೀಯರು ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸುಧಾಕರ್ ಅವರ ನಿರ್ಲಕ್ಷ್ಯದಿಂದ ಮತ್ತು ಅವರ ಆಪ್ತರೇ ಗಣಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ತೋರಿದ್ದಾರೆ.

ಕಠಿಣ ಕ್ರಮಕ್ಕೆ ಸಿಎಂ ಸೂಚನೆ
ಘಟನೆ ಸಂಬಂಧ ಆಘಾತ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು , ಮಾಹಿತಿ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸ್ಫೋಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ, ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
ಗಣಿ ಬ್ಲಾಸ್ಟ್ ತನಿಖೆಗೆ ಉನ್ನತ ಸಮಿತಿ ; 15 ಕಾರ್ಮಿಕರ ಪೈಕಿ ಸಿಕ್ಕಿದ್ದು ಐದೇ ಶವ !
ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. (2/2)
— CM of Karnataka (@CMofKarnataka) February 23, 2021
Six workers were killed in an explosion of dynamites and guillotine sticks in a stone crusher unit at Chikkaballapur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm