ಬ್ರೇಕಿಂಗ್ ನ್ಯೂಸ್
23-02-21 12:48 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.23: ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಲು ಕ್ವಾರಿಯಲ್ಲಿ ಆರು ಮಂದಿ ಬಲಿಯಾಗಿರುವುದು ಜಿಲೆಟಿನ್ ಸ್ಫೋಟದಿಂದ ಅಲ್ಲ. ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿಗಳ ದುರಾಡಳಿತಕ್ಕೆ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸ್ಫೋಟ ನಡೆದು ತಿಂಗಳು ತುಂಬುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಸ್ಫೋಟ ನಡೆದಿರುವುದು ರಾಜ್ಯ ಸರಕಾರದ ಬೇಜವಾಬ್ದಾರಿತನ, ನಿಷ್ಕ್ರಿಯ ಸರಕಾರ ಹಾಗೂ ಭ್ರಷ್ಟ ವ್ಯವಸ್ಥೆಗೆ ಸಾಕ್ಷಿ. ಮುಖ್ಯಮಂತ್ರಿಗಳೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ..? ಭ್ರಷ್ಟರನ್ನೇ ಅಥವಾ ಸಾಮಾನ್ಯ ಜನರನ್ನೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಮಾಯಕ ಜೀವ ಹಾನಿಗೆ ಕಾರಣವಾದ ಜಿಲೆಟಿನ್ ಸ್ಫೋಟ ಘಟನೆ ಆಘಾತಕಾರಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಜೊತೆಗೆ ನೊಂದ ಕುಟುಂಬಗಳಿಗೆ ಸರಕಾರ ತಕ್ಷಣ ಪರಿಹಾರ ಘೋಷಿಸುವಂತೆ ಆಗ್ರಹಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗ ದುರಂತ ಮಾಸುವ ಮುನ್ನವೇ ಮತ್ತೊಂದು ಗಣಿ ಸ್ಫೋಟ! ಆರು ಸಾವು, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ಶಿವಮೊಗ್ಗದಲ್ಲಿ ಸ್ಫೋಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ, ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ @CMofKarnataka ಅವರು ತಕ್ಷಣ ಆದೇಶಿಸಬೇಕು.
— Siddaramaiah (@siddaramaiah) February 23, 2021
ಇದಕ್ಕಿಂತ ಮೊದಲು
ಈ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತ್ನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು#ChikkaballapurBlast
4/6
ರಾಜ್ಯದಲ್ಲಿಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ.
— Siddaramaiah (@siddaramaiah) February 23, 2021
ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ,
ಉಸ್ತುವಾರಿ ಸಚಿವ @mla_sudhakar ಅವರ ಗಮನಕ್ಕೆ ಬಂದಿರಲಿಲ್ಲವೇ?#ChikkaballapurBlast
5/6
ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಅನಧಿಕೃತ ಕ್ರಷರ್,ಕ್ವಾರಿಗಳಿವೆ ಎಂದು ಹೇಳಲಾಗುತ್ತಿದೆ.
— Siddaramaiah (@siddaramaiah) February 23, 2021
ಇವುಗಳ ಪಟ್ಟಿಯನ್ನು @CMofKarnataka ಅವರು ತಕ್ಷಣ ಬಿಡುಗಡೆಗೊಳಿಸ ಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು.#ChikkaballapurBlast
6/6
Chikkaballapur guillotine blast Siddaramaiah slams at BJP govt for showing negligence in not stopping illegal stone quarry centres.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm