ಬ್ರೇಕಿಂಗ್ ನ್ಯೂಸ್
23-02-21 01:51 pm Headline Karnataka News Network ಕರ್ನಾಟಕ
ನವದೆಹಲಿ, ಫೆ.23 : ಸರಕಾರದಿಂದ ಅನುಮತಿ ಪಡೆದಿರುವ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಮಾತ್ರ ಸ್ಫೋಟಕ ಸಾಮಗ್ರಿಗಳನ್ನು ಬಳಕೆ ಮಾಡುವಂತಾಗಲು ಹೊಸ ಕಾನೂನು ಜಾರಿ ಮಾಡಲಾಗವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸಚಿವರು ನವದೆಹಲಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಘಟನೆಯ ಬಗ್ಗೆ ಮಾಧ್ಯದವರು ಪ್ರಶ್ನೆ ಮಾಡಿದಾಗ, ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದ ಇಂಥ ಅವಘಡಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ಸಾಮಗ್ರಿ ಬಳಸುವ ಕಾನೂನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಈ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ರೀತಿಯ ಅವಘಡಗಳು ಗಣಿ ಕಾರ್ಮಿಕರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಜಿಲೆಟಿನ್ ಕಡ್ಡಿ ಸಹಿತ ಸ್ಫೋಟಕಗಳು ಮತ್ತು ಇತರ ಸೋಟಕ ಸಾಮಗ್ರಿಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಹಿರೇನಾಗವಲ್ಲಿ ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಶಿವಮೊಗ್ಗ ದುರಂತ ಮಾಸುವ ಮುನ್ನವೇ ಮತ್ತೊಂದು ಗಣಿ ಸ್ಫೋಟ! ಆರು ಸಾವು, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ಸ್ಫೋಟ ಪ್ರಕರಣ ; ಮುಖ್ಯಮಂತ್ರಿ ದುರಾಡಳಿತಕ್ಕೆ ಅಮಾಯಕರು ಬಲಿ : ಸಿದ್ದರಾಮಯ್ಯ ಆಕ್ರೋಶ
6 Dead In Quarry Blast In Karnataka's Chikkaballapur Minister of Mines and Geology Murugesh Nirani brings new law.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm