ಬ್ರೇಕಿಂಗ್ ನ್ಯೂಸ್
26-02-21 04:36 pm Headline Karnataka News Network ಕರ್ನಾಟಕ
ಮೈಸೂರು,ಫೆ.26: ಗುಂಡಿಗೆ ಗಟ್ಟಿ ಇದ್ದರೆ ಎಂತಹ ಅಪಾಯವನ್ನಾದರೂ ಜಯಿಸಿಬಹುದು ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇಲ್ಲಿದೆ. ಮೈಸೂರಿನ ಬಾಲಕನೊಬ್ಬ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದ್ದಾನೆ. ಚಿರತೆ ದಾಳಿ ಮಾಡಿ, ಹೊತ್ತುಕೊಂಡು ಹೋಗಿದ್ದಾಗ, ಚಿರತೆ ಕಣ್ಣಿಗೆ ತಿವಿದು ಬಾಲಕ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾನೆ. ಇನ್ನು ಈತನಿಗೆ ಸಾಥ್ ನೀಡಿದ ತಂದೆ ಪ್ರಾಣದ ಹಂಗು ತೊರೆದು ಮಗನನ್ನು ಉಳಿಸಿದ್ದಾರೆ.
ಮೈಸೂರು ತಾಲೂಕಿನ ಕಡಕೊಳ ಗ್ರಾಮದ ರವಿಕುಮಾರ್ ಹಾಗೂ ಲಕ್ಷ್ಮಿ ಎಂಬುವವರ ಪುತ್ರ ನಂದನ್ ಸದ್ಯ 6ನೇ ತರಗತಿಯಲ್ಲಿ ಓದುತ್ತಿರುವ ಬಾಲಕ. ಪ್ರತಿ ದಿನ ಶಾಲೆ ಮುಗಿಸಿಕೊಂಡು ತಂದೆ ಜೊತೆ ಜಮೀನಿಗೆ ಹೋಗುತ್ತಿದ್ದ. ಅದೇ ರೀತಿ ಕಳೆದ ಶನಿವಾರ ಕೂಡ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿರುವ ಹಸುಗಳಿಗೆ ಹುಲ್ಲನ್ನು ತೆಗೆದುಕೊಳ್ಳಲು ಪ್ರಾರಂಭ ಮಾಡಿದ್ದು, ಆಗ ಏಕಾಏಕಿ ಬಾಲಕನ ಮೇಲೆ ಹಿಂದಿನಿಂದ ಚಿರತೆ ದಾಳಿ ಮಾಡಿದೆ.
ಒಂದು ಕ್ಷಣ ಕಕ್ಕಾಬಿಕ್ಕಿಯಾದ ಬಾಲಕನಿಗೆ ಏನೂ ತೋಚದಂತೆ ಆಗಿದ್ದು, ಈ ವೇಳೆ ಚಿರತೆ ಬಾಲಕನ ಕುತ್ತಿಗೆಯ ಭಾಗವನ್ನ ಹಿಡಿದು ಹೊತ್ತೊಯ್ಯಲು ಮುಂದಾಗಿದೆ. ತಕ್ಷಣ ಚಿರತೆಯಿಂದ ತಪ್ಪಿಸಿಕೊಳ್ಳಲು ಬಾಲಕ ಪ್ರಯತ್ನ ಪಟ್ಟಿದ್ದಾನೆ. ಆದರೆ ಚಿರತೆ ಬಲವಾಗಿ ಹಿಡಿದುಕೊಂಡಿದ್ದರಿಂದ ಯುವಕನಿಗೆ ಬಿಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ವೇಳೆ ಚಿರತೆ ಕಣ್ಣಿಗೆ ಬೆರಳಿನಿಂದ ತಿವಿದು ಪಾರಾಗಲು ಪ್ರಯತ್ನ ಪಟ್ಟಿದ್ದು, ನಂತರ ಅಲ್ಲೆ ಇದ್ದ ನಂದನ್ ತಂದೆ ಸ್ಥಳಕ್ಕೆ ಬಂದು ಚಿರತೆಯನ್ನು ಎಳೆದು ಮಗನನ್ನ ಚಿರತೆ ಬಾಯಿಂದ ಬಿಡಿಸಿದ್ದಾರೆ.
ಸದ್ಯ ಕಡಕೊಳದ ಬೀರೇಗೌಡನಹುಂಡಿ ಸುತ್ತಮುತ್ತ ಚಿರತೆ ಕಾಟ ಇದೆ ಎಂದು ಈ ಹಿಂದಿನಿಂದಲೂ ದೂರುಗಳು ಕೇಳಿ ಬಂದಿದ್ದವು. ಆದರೆ ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಸದ್ಯ ಇನ್ನಾದರೂ ಅರಣ್ಯ ಇಲಾಖೆ ಆದಷ್ಟು ಬೇಗ ಚಿರತೆ ಸೆರೆ ಹಿಡಿಯಬೇಕು ಎಂಬುದು ಸ್ಥಳೀಯರ ಮನವಿ, ಆಗ್ರವಾಗಿದೆ. ಇನ್ನು ನಂದನ್ ತಾಯಿ ಕೂಡ ಇದೇ ವಿಚಾರ ಹೇಳುತ್ತಿದ್ದು, ನನ್ನ ಮಗನಿಗೆ ಆದಂತಹ ಆಘಾತ ಬೇರೆ ಮಕ್ಕಳಿಗೆ ಆಗಬಾರದು. ಆದಷ್ಟು ಬೇಗ ಚಿರತೆಯನ್ನ ಸೆರೆ ಹಿಡಿಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಒಟ್ಟಾರೆ, ಚಿರತೆ ಬಾಯಿಗೆ ಆಹಾರವಾಗಬೇಕಿದ್ದ ಬಾಲಕ ದಿಟ್ಟ ಧೈರ್ಯ ಪ್ರದರ್ಶನ ತೋರಿ ಪ್ರಾಣ ಉಳಿಸಿಕೊಂಡಿದ್ದು, ಬಾಲಕನ ಶೌರ್ಯಕ್ಕೆ ನಿಜಕ್ಕೂ ಮೆಚ್ಚಲೆಬೇಕು.
A little boy from a Village in Mysore escaped death by fighting with Cheetah when it attacked him.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm