ಬ್ರೇಕಿಂಗ್ ನ್ಯೂಸ್
26-02-21 04:36 pm Headline Karnataka News Network ಕರ್ನಾಟಕ
ಮೈಸೂರು,ಫೆ.26: ಗುಂಡಿಗೆ ಗಟ್ಟಿ ಇದ್ದರೆ ಎಂತಹ ಅಪಾಯವನ್ನಾದರೂ ಜಯಿಸಿಬಹುದು ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇಲ್ಲಿದೆ. ಮೈಸೂರಿನ ಬಾಲಕನೊಬ್ಬ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದ್ದಾನೆ. ಚಿರತೆ ದಾಳಿ ಮಾಡಿ, ಹೊತ್ತುಕೊಂಡು ಹೋಗಿದ್ದಾಗ, ಚಿರತೆ ಕಣ್ಣಿಗೆ ತಿವಿದು ಬಾಲಕ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾನೆ. ಇನ್ನು ಈತನಿಗೆ ಸಾಥ್ ನೀಡಿದ ತಂದೆ ಪ್ರಾಣದ ಹಂಗು ತೊರೆದು ಮಗನನ್ನು ಉಳಿಸಿದ್ದಾರೆ.
ಮೈಸೂರು ತಾಲೂಕಿನ ಕಡಕೊಳ ಗ್ರಾಮದ ರವಿಕುಮಾರ್ ಹಾಗೂ ಲಕ್ಷ್ಮಿ ಎಂಬುವವರ ಪುತ್ರ ನಂದನ್ ಸದ್ಯ 6ನೇ ತರಗತಿಯಲ್ಲಿ ಓದುತ್ತಿರುವ ಬಾಲಕ. ಪ್ರತಿ ದಿನ ಶಾಲೆ ಮುಗಿಸಿಕೊಂಡು ತಂದೆ ಜೊತೆ ಜಮೀನಿಗೆ ಹೋಗುತ್ತಿದ್ದ. ಅದೇ ರೀತಿ ಕಳೆದ ಶನಿವಾರ ಕೂಡ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿರುವ ಹಸುಗಳಿಗೆ ಹುಲ್ಲನ್ನು ತೆಗೆದುಕೊಳ್ಳಲು ಪ್ರಾರಂಭ ಮಾಡಿದ್ದು, ಆಗ ಏಕಾಏಕಿ ಬಾಲಕನ ಮೇಲೆ ಹಿಂದಿನಿಂದ ಚಿರತೆ ದಾಳಿ ಮಾಡಿದೆ.

ಒಂದು ಕ್ಷಣ ಕಕ್ಕಾಬಿಕ್ಕಿಯಾದ ಬಾಲಕನಿಗೆ ಏನೂ ತೋಚದಂತೆ ಆಗಿದ್ದು, ಈ ವೇಳೆ ಚಿರತೆ ಬಾಲಕನ ಕುತ್ತಿಗೆಯ ಭಾಗವನ್ನ ಹಿಡಿದು ಹೊತ್ತೊಯ್ಯಲು ಮುಂದಾಗಿದೆ. ತಕ್ಷಣ ಚಿರತೆಯಿಂದ ತಪ್ಪಿಸಿಕೊಳ್ಳಲು ಬಾಲಕ ಪ್ರಯತ್ನ ಪಟ್ಟಿದ್ದಾನೆ. ಆದರೆ ಚಿರತೆ ಬಲವಾಗಿ ಹಿಡಿದುಕೊಂಡಿದ್ದರಿಂದ ಯುವಕನಿಗೆ ಬಿಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ವೇಳೆ ಚಿರತೆ ಕಣ್ಣಿಗೆ ಬೆರಳಿನಿಂದ ತಿವಿದು ಪಾರಾಗಲು ಪ್ರಯತ್ನ ಪಟ್ಟಿದ್ದು, ನಂತರ ಅಲ್ಲೆ ಇದ್ದ ನಂದನ್ ತಂದೆ ಸ್ಥಳಕ್ಕೆ ಬಂದು ಚಿರತೆಯನ್ನು ಎಳೆದು ಮಗನನ್ನ ಚಿರತೆ ಬಾಯಿಂದ ಬಿಡಿಸಿದ್ದಾರೆ.
ಸದ್ಯ ಕಡಕೊಳದ ಬೀರೇಗೌಡನಹುಂಡಿ ಸುತ್ತಮುತ್ತ ಚಿರತೆ ಕಾಟ ಇದೆ ಎಂದು ಈ ಹಿಂದಿನಿಂದಲೂ ದೂರುಗಳು ಕೇಳಿ ಬಂದಿದ್ದವು. ಆದರೆ ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಸದ್ಯ ಇನ್ನಾದರೂ ಅರಣ್ಯ ಇಲಾಖೆ ಆದಷ್ಟು ಬೇಗ ಚಿರತೆ ಸೆರೆ ಹಿಡಿಯಬೇಕು ಎಂಬುದು ಸ್ಥಳೀಯರ ಮನವಿ, ಆಗ್ರವಾಗಿದೆ. ಇನ್ನು ನಂದನ್ ತಾಯಿ ಕೂಡ ಇದೇ ವಿಚಾರ ಹೇಳುತ್ತಿದ್ದು, ನನ್ನ ಮಗನಿಗೆ ಆದಂತಹ ಆಘಾತ ಬೇರೆ ಮಕ್ಕಳಿಗೆ ಆಗಬಾರದು. ಆದಷ್ಟು ಬೇಗ ಚಿರತೆಯನ್ನ ಸೆರೆ ಹಿಡಿಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಒಟ್ಟಾರೆ, ಚಿರತೆ ಬಾಯಿಗೆ ಆಹಾರವಾಗಬೇಕಿದ್ದ ಬಾಲಕ ದಿಟ್ಟ ಧೈರ್ಯ ಪ್ರದರ್ಶನ ತೋರಿ ಪ್ರಾಣ ಉಳಿಸಿಕೊಂಡಿದ್ದು, ಬಾಲಕನ ಶೌರ್ಯಕ್ಕೆ ನಿಜಕ್ಕೂ ಮೆಚ್ಚಲೆಬೇಕು.
A little boy from a Village in Mysore escaped death by fighting with Cheetah when it attacked him.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm