ಬ್ರೇಕಿಂಗ್ ನ್ಯೂಸ್
26-02-21 10:13 pm Bangalore correspondent ಕರ್ನಾಟಕ
ಬೆಂಗಳೂರು, ಫೆ 26: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ವಂಚಿಸಿದ್ದ ಸಿದ್ದಲಿಂಗಸ್ವಾಮಿ(60) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಆತ್ಮಹತ್ಯೆಗೆ ಕಾರಣವೇನು ?
ಅಂದ ಹಾಗೆ, ಮೂಲತಃ ಮಂಡ್ಯ ಮೂಲದವನಾದ ಸಿದ್ದಲಿಂಗಸ್ವಾಮಿ ತಾನು BDA ನೌಕರನೆಂದು ಪರಿಚಯಿಸಿಕೊಂಡು ವಂಚನೆ ನಡೆಸುತ್ತಿದ್ದ. ಜನರಿಗೆ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸುತ್ತಿದ್ದ. BDA ಸೈಟ್ ಮರುಹಂಚಿಕೆ ಮಾಡಿಸಿಕೊಡುವುದಾಗಿ ಹೇಳಿದ್ದ ಸಿದ್ದಲಿಂಗಸ್ವಾಮಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿ 13.28 ಲಕ್ಷ ಪಡೆದಿದ್ದ. ಈ ಕೃತ್ಯಕ್ಕೆ, ಆತ BDAನ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ವಂಚನೆ ಮಾಡಿದ್ದ.

ಇನ್ನು, ಈತನ ವಂಚನೆ ಬಯಲಾಗುತ್ತಿದ್ದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕಳೆದ ವರ್ಷ ಡಿಸೆಂಬರ್ನಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ನಾಗರಾಜ್ ಎಂಬುವವರ ದೂರಿನ ಮೇರೆಗೆ FIR ದಾಖಲಾಗಿತ್ತು. ಹೀಗಾಗಿ, ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದ ಪೊಲೀಸರು ಸಿದ್ದಲಿಂಗಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ, ಆರೋಪಿ ಸಿದ್ದಲಿಂಗಸ್ವಾಮಿ ವಿದ್ಯಾರಣ್ಯಪುರದಲ್ಲಿರುವ ತನ್ನ ಮನೆಯಲ್ಲಿ ಕೆಲ ವಸ್ತು ಇಟ್ಟಿದ್ದಾಗಿ ಹೇಳಿದ್ದ. ಹಾಗಾಗಿ, ವಿದ್ಯಾರಣ್ಯಪುರದ ನಿವಾಸಕ್ಕೆ ಸ್ಥಳ ಮಹಜರಿಗೆ ಪೊಲೀಸರು ಕರೆ ತಂದಿದ್ದರು.
ತನ್ನ ಪತ್ನಿ ಮತ್ತು ಮಗಳ ಜೊತೆ ವಿದ್ಯಾರಣ್ಯಪುರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ಫ್ಲ್ಯಾಟ್ ಪಡೆದಿದ್ದ ಸಿದ್ದಲಿಂಗಸ್ವಾಮಿ ಪೊಲೀಸರನ್ನು ಅಲ್ಲಿಗೆ ಕರೆತಂದಿದ್ದನು. ಈ ವೇಳೆ, ಮನೆಯ ಕಿಚನ್ ಮೂಲಕ ತೆರಳಿ ಕಟ್ಟಡದಿಂದ ಕೆಳಗೆ ಹಾರಿದ್ದ. ಘಟನೆಯಲ್ಲಿ ತೀವ್ರ ರಕ್ತಸ್ರಾವ ಅನುಭವಿಸಿದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.
ಆರೋಪಿಯನ್ನು ಪೊಲೀಸರು ಫೆ.24ರಂದು ಬಂಧಿಸಿ ಕೋರ್ಟ್ ಮೂಲಕ ಕಸ್ಟಡಿಗೆ ಪಡೆದಿದ್ರು. ಹೆಚ್ಚಿನ ವಿಚಾರಣೆಗೆ ಹನುಮಂತನಗರ ಪೊಲೀಸರು ವಶಕ್ಕೆ ಪಡೆದಿದ್ದರು.
Accused who was in Police Custody committed suicide by jumping from building in Bangalore. He was brought by the cops for Spot Mahazar.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm