ಬ್ರೇಕಿಂಗ್ ನ್ಯೂಸ್
26-02-21 10:13 pm Bangalore correspondent ಕರ್ನಾಟಕ
ಬೆಂಗಳೂರು, ಫೆ 26: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ವಂಚಿಸಿದ್ದ ಸಿದ್ದಲಿಂಗಸ್ವಾಮಿ(60) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಆತ್ಮಹತ್ಯೆಗೆ ಕಾರಣವೇನು ?
ಅಂದ ಹಾಗೆ, ಮೂಲತಃ ಮಂಡ್ಯ ಮೂಲದವನಾದ ಸಿದ್ದಲಿಂಗಸ್ವಾಮಿ ತಾನು BDA ನೌಕರನೆಂದು ಪರಿಚಯಿಸಿಕೊಂಡು ವಂಚನೆ ನಡೆಸುತ್ತಿದ್ದ. ಜನರಿಗೆ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸುತ್ತಿದ್ದ. BDA ಸೈಟ್ ಮರುಹಂಚಿಕೆ ಮಾಡಿಸಿಕೊಡುವುದಾಗಿ ಹೇಳಿದ್ದ ಸಿದ್ದಲಿಂಗಸ್ವಾಮಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿ 13.28 ಲಕ್ಷ ಪಡೆದಿದ್ದ. ಈ ಕೃತ್ಯಕ್ಕೆ, ಆತ BDAನ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ವಂಚನೆ ಮಾಡಿದ್ದ.

ಇನ್ನು, ಈತನ ವಂಚನೆ ಬಯಲಾಗುತ್ತಿದ್ದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕಳೆದ ವರ್ಷ ಡಿಸೆಂಬರ್ನಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ನಾಗರಾಜ್ ಎಂಬುವವರ ದೂರಿನ ಮೇರೆಗೆ FIR ದಾಖಲಾಗಿತ್ತು. ಹೀಗಾಗಿ, ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದ ಪೊಲೀಸರು ಸಿದ್ದಲಿಂಗಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ, ಆರೋಪಿ ಸಿದ್ದಲಿಂಗಸ್ವಾಮಿ ವಿದ್ಯಾರಣ್ಯಪುರದಲ್ಲಿರುವ ತನ್ನ ಮನೆಯಲ್ಲಿ ಕೆಲ ವಸ್ತು ಇಟ್ಟಿದ್ದಾಗಿ ಹೇಳಿದ್ದ. ಹಾಗಾಗಿ, ವಿದ್ಯಾರಣ್ಯಪುರದ ನಿವಾಸಕ್ಕೆ ಸ್ಥಳ ಮಹಜರಿಗೆ ಪೊಲೀಸರು ಕರೆ ತಂದಿದ್ದರು.
ತನ್ನ ಪತ್ನಿ ಮತ್ತು ಮಗಳ ಜೊತೆ ವಿದ್ಯಾರಣ್ಯಪುರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ಫ್ಲ್ಯಾಟ್ ಪಡೆದಿದ್ದ ಸಿದ್ದಲಿಂಗಸ್ವಾಮಿ ಪೊಲೀಸರನ್ನು ಅಲ್ಲಿಗೆ ಕರೆತಂದಿದ್ದನು. ಈ ವೇಳೆ, ಮನೆಯ ಕಿಚನ್ ಮೂಲಕ ತೆರಳಿ ಕಟ್ಟಡದಿಂದ ಕೆಳಗೆ ಹಾರಿದ್ದ. ಘಟನೆಯಲ್ಲಿ ತೀವ್ರ ರಕ್ತಸ್ರಾವ ಅನುಭವಿಸಿದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.
ಆರೋಪಿಯನ್ನು ಪೊಲೀಸರು ಫೆ.24ರಂದು ಬಂಧಿಸಿ ಕೋರ್ಟ್ ಮೂಲಕ ಕಸ್ಟಡಿಗೆ ಪಡೆದಿದ್ರು. ಹೆಚ್ಚಿನ ವಿಚಾರಣೆಗೆ ಹನುಮಂತನಗರ ಪೊಲೀಸರು ವಶಕ್ಕೆ ಪಡೆದಿದ್ದರು.
Accused who was in Police Custody committed suicide by jumping from building in Bangalore. He was brought by the cops for Spot Mahazar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm