ಬ್ರೇಕಿಂಗ್ ನ್ಯೂಸ್
03-03-21 12:27 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 3: ಸಾಹುಕಾರ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ.
ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಈಗಾಗಲೇ ದೂರು ಸಲ್ಲಿಕೆಯಾಗಿದೆ. ಕೆಪಿಟಿಸಿಎಲ್ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ಥ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಭೇಟಿ ಬಳಿಕ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಇದು ತುಂಬಾ ಸೂಕ್ಷ್ಮವಾದ ವಿಚಾರ ಆಗಿರುವ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಂತ್ರಸ್ತೆಗೆ ಭಾರೀ ಪ್ರಮಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ಒಂದೆರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ. ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಕುಟುಂಬದ ಸದಸ್ಯರೊಬ್ಬರು ಆಗಮಿಸಿ ಸೋಮವಾರ ನನಗೆ ಸಿಡಿ ನೀಡಿದರು. ಕಿರು ಚಿತ್ರ ನಿರ್ಮಾಣಕ್ಕೆಂದು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದಾಗ ಕೆಪಿಟಿಸಿಎಲ್ನಲ್ಲಿ ಕೆಲಸ ನೀಡುವುದಾಗಿ ಹೇಳಿಕೆ ನೀಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಹಲವು ಪ್ರಕರಣಗಳಲ್ಲಿ ನನಗೆ ತುಂಬಾ ನೋವು ಕೊಟ್ಟಿದ್ದಾರೆ. ನನ್ನಿಂದ ಅವರ ವಿರುದ್ಧ ಹೋರಾಟ ಮಾಡಲು ಆಗುತ್ತಿಲ್ಲ. ನ್ಯಾಯ ಕೊಡಿಸಿ ಎಂದು ನನ್ನ ಬಳಿ ಮನವಿ ಮಾಡಿದರು. ನಾನು ನಮ್ಮ ವಕೀಲರ ಜೊತೆ ಚರ್ಚೆ ನಡೆಸಿ, ಇದೀಗ ದೂರು ನೀಡಲು ಬಂದಿದ್ದೇನೆ ಎಂದು ದಿನೇಶ್ ತಿಳಿಸಿದ್ದರು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
Minister Ramesh Jarkiholi caught in sex CD scandal yet FIR has not been registered by the Police as the Victim girl hasn't approached the police station to file the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm