ಬ್ರೇಕಿಂಗ್ ನ್ಯೂಸ್
03-03-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.3: ಅಶ್ಲೀಲ ಸಿಡಿ ಜಾಲದಲ್ಲಿ ಸಿಕ್ಕಿಬಿದ್ದ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜಿನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನೆ ಮಾಡಿದ್ದಾಗಿ ಜಾರಕಿಹೊಳಿ ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆ ಇರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂಬ ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದ್ದಾರೆಂದು ತಿಳಿದುಬಂದಿದೆ.

ಹೈಕಮಾಂಡ್ ತೀವ್ರ ಗರಂ !
ಸಿಡಿ ವಿಚಾರದಲ್ಲಿ ಶಿಸ್ತಿನ ಪಕ್ಷ ಎಂಬ ಹೆಸರಿನ ಬಿಜೆಪಿಗೆ ಭಾರೀ ಮುಜುಗರ ಆಗಿತ್ತು. ಇದರಿಂದ ತೀವ್ರ ಸಿಡಿಮಿಡಿ ಆಗಿದ್ದ ಬಿಜೆಪಿ ಹೈಕಮಾಂಡ್, ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ. ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿದ್ದರು ಎನ್ನಲಾಗಿದೆ. ಇದರಿಂದ ಇಕ್ಕಟ್ಟಿಗೆ ಬಿದ್ದ ಯಡಿಯೂರಪ್ಪ, ಜಾರಕಿಹೊಳಿ ಬಳಿ ರಾಜಿನಾಮೆ ಕೇಳಿದ್ದರು.

ರಾಜಿನಾಮೆ ನೀಡಲ್ಲ ಎಂದಿದ್ದ ಜಾರಕಿಹೊಳಿ !
ಸಿಡಿ ಪ್ರಕರಣ ಹೊರಬಿದ್ದ ಬಳಿಕ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಜಾಗಕ್ಕೆ ತೆರಳಿದ್ದ ಸಚಿವ ಜಾರಕಿಹೊಳಿ, ರಾತ್ರಿ ವೇಳೆ ಮಾಧ್ಯಮದ ಮುಂದೆ ಬಂದು ನಾನು ತಪ್ಪು ಮಾಡಿಲ್ಲ. ಯುವತಿ ಬಗ್ಗೆ ಗೊತ್ತಿಲ್ಲ. ರಾಜಿನಾಮೆ ನೀಡಲ್ಲ. ತನಿಖೆ ಆಗಲಿ, ಆಮೇಲೆ ನೋಡೋಣ ಎಂದಿದ್ದರು. ಆದರೆ, ಜಾರಕಿಹೊಳಿ ಮಾತು ಸಂಚಲನ ಎಬ್ಬಿಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ತೀವ್ರ ಟೀಕೆಗೆ ಕಾರಣವಾಗಿತ್ತು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
ಜಾರಕಿಹೊಳಿ ಮಾನ-ಮರ್ಯಾದೆ ಇದ್ದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಿ ; ಸಿದ್ದರಾಮಯ್ಯ ಅವಾಜ್
Karnataka Water Resources minister Ramesh Jarkiholi resigns from the minister post by issuing a letter to CM BSY. The minister was in controversy after a CD allegedly showing him in a compromising position with a woman emerged on Tuesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm