ಬ್ರೇಕಿಂಗ್ ನ್ಯೂಸ್
03-03-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.3: ಅಶ್ಲೀಲ ಸಿಡಿ ಜಾಲದಲ್ಲಿ ಸಿಕ್ಕಿಬಿದ್ದ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜಿನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನೆ ಮಾಡಿದ್ದಾಗಿ ಜಾರಕಿಹೊಳಿ ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆ ಇರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂಬ ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದ್ದಾರೆಂದು ತಿಳಿದುಬಂದಿದೆ.

ಹೈಕಮಾಂಡ್ ತೀವ್ರ ಗರಂ !
ಸಿಡಿ ವಿಚಾರದಲ್ಲಿ ಶಿಸ್ತಿನ ಪಕ್ಷ ಎಂಬ ಹೆಸರಿನ ಬಿಜೆಪಿಗೆ ಭಾರೀ ಮುಜುಗರ ಆಗಿತ್ತು. ಇದರಿಂದ ತೀವ್ರ ಸಿಡಿಮಿಡಿ ಆಗಿದ್ದ ಬಿಜೆಪಿ ಹೈಕಮಾಂಡ್, ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ. ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿದ್ದರು ಎನ್ನಲಾಗಿದೆ. ಇದರಿಂದ ಇಕ್ಕಟ್ಟಿಗೆ ಬಿದ್ದ ಯಡಿಯೂರಪ್ಪ, ಜಾರಕಿಹೊಳಿ ಬಳಿ ರಾಜಿನಾಮೆ ಕೇಳಿದ್ದರು.

ರಾಜಿನಾಮೆ ನೀಡಲ್ಲ ಎಂದಿದ್ದ ಜಾರಕಿಹೊಳಿ !
ಸಿಡಿ ಪ್ರಕರಣ ಹೊರಬಿದ್ದ ಬಳಿಕ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಜಾಗಕ್ಕೆ ತೆರಳಿದ್ದ ಸಚಿವ ಜಾರಕಿಹೊಳಿ, ರಾತ್ರಿ ವೇಳೆ ಮಾಧ್ಯಮದ ಮುಂದೆ ಬಂದು ನಾನು ತಪ್ಪು ಮಾಡಿಲ್ಲ. ಯುವತಿ ಬಗ್ಗೆ ಗೊತ್ತಿಲ್ಲ. ರಾಜಿನಾಮೆ ನೀಡಲ್ಲ. ತನಿಖೆ ಆಗಲಿ, ಆಮೇಲೆ ನೋಡೋಣ ಎಂದಿದ್ದರು. ಆದರೆ, ಜಾರಕಿಹೊಳಿ ಮಾತು ಸಂಚಲನ ಎಬ್ಬಿಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ತೀವ್ರ ಟೀಕೆಗೆ ಕಾರಣವಾಗಿತ್ತು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
ಜಾರಕಿಹೊಳಿ ಮಾನ-ಮರ್ಯಾದೆ ಇದ್ದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಿ ; ಸಿದ್ದರಾಮಯ್ಯ ಅವಾಜ್
Karnataka Water Resources minister Ramesh Jarkiholi resigns from the minister post by issuing a letter to CM BSY. The minister was in controversy after a CD allegedly showing him in a compromising position with a woman emerged on Tuesday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm