ರಮೇಶ್​ ಜಾರಕಿಹೊಳಿ ರಾಜಿನಾಮೆ ; ಬೆಂಬಲಿಗರಿಂದ 8ಕ್ಕೂ ಹೆಚ್ಚು ಬಸ್​ಗಳ ಮೇಲೆ ಕಲ್ಲು ತೂರಾಟ

03-03-21 08:53 pm       Headline Karnataka News Network   ಕರ್ನಾಟಕ

ರಮೇಶ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರೆನ್ನಲಾದ ಕೆಲವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಹೆಚ್ಚು ಬಸ್​ಗಳ ಮೇಲೆ‌ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗ್ತಿದೆ.

ಬೆಳಗಾವಿ, ಮಾ 3: ರಮೇಶ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರೆನ್ನಲಾದ ಕೆಲವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಹೆಚ್ಚು ಬಸ್​ಗಳ ಮೇಲೆ‌ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗ್ತಿದೆ.

ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್​ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್​ಗಳಲ್ಲಿ ಬಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್​ನ ಹಿಂಬದಿಯ ಹಾಗೂ ಮುಂಬದಿಯ ಗಾಜುಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.

ಕೂಡಲೇ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಬಸ್​ಗಳಲ್ಲಿ ಪೊಲೀಸ್​ ಭದ್ರತೆಯೊಂದಿಗೆ ಕಳುಹಿಸಲಾಗಿದೆ. ಇತ್ತ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೈಲಹೊಂಗಲ, ಗೋಕಾಕ್, ಬೆಳಗಾವಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ಸೇರಿದಂತೆ ವಿವಿಧ ಮಾರ್ಗಗಳಿಗೆ ಸಂಚರಿಸುತ್ತಿದ್ದ ಬಸ್​ಗಳನ್ನು ಗೋಕಾಕ್ ಡಿಪೋದಲ್ಲಿ ನಿಲ್ಲಿಸಲಾಗಿತ್ತು. ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Eight government buses stone pelted in Belgaum after minister Ramesh Jarkiholis resignation due to the sex scandal.