ಬ್ರೇಕಿಂಗ್ ನ್ಯೂಸ್
04-03-21 12:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 4: ಅಶ್ಲೀಲ ಸಿಡಿ ಜಗಜ್ಜಾಹೀರಾದ ನಂತರ ಭಾರೀ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರ ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.
ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಹ ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ.
ನಿನ್ನೆ ತಡರಾತ್ರಿ ತನಕವೂ ಅಜ್ಞಾತ ಸ್ಥಳದಲ್ಲಿ ಮುಂದಿನ ನಡೆಯ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ ಸದ್ಯ ಬೆಂಗಳೂರು ನಿವಾಸಕ್ಕೆ ಬಂದಿದ್ದಾರೆ. ಸಿಡಿಯಿಂದಾಗಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಸಂಕಟ ಉಂಟಾಗಿರುವುದರಿಂದ ಮುಜುಗರದಿಂದ ತಪ್ಪಿಸುಕೊಳ್ಳಲು ಇಂದು ನಡೆಯುವ ಸದನಕ್ಕೂ ಬಹುತೇಕ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಮತ್ತು ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ವಿಪಕ್ಷಗಳು ಹಾಗೂ ಸೈದ್ಧಾಂತಿಕ ವಿರೋಧಿಗಳು ಅದನ್ನೇ ಬಹುಮುಖ್ಯ ಅಸ್ತ್ರವಾಗಿರಿಸಿಕೊಂಡು ರಮೇಶ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನೂ ಮೂವರು ಪ್ರಭಾವಿಗಳ ವಿಡಿಯೋ ಇರುವುದಾಗಿ ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.
BJP Minister Ramesh Jarkiholi who has been caught in Caught in sex-for-job scandal is now planned to approach the court to stop his sex video from being played on News and Social Media Platforms.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm