ಬ್ರೇಕಿಂಗ್ ನ್ಯೂಸ್
04-03-21 12:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 4: ಅಶ್ಲೀಲ ಸಿಡಿ ಜಗಜ್ಜಾಹೀರಾದ ನಂತರ ಭಾರೀ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರ ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.
ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಹ ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ.

ನಿನ್ನೆ ತಡರಾತ್ರಿ ತನಕವೂ ಅಜ್ಞಾತ ಸ್ಥಳದಲ್ಲಿ ಮುಂದಿನ ನಡೆಯ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ ಸದ್ಯ ಬೆಂಗಳೂರು ನಿವಾಸಕ್ಕೆ ಬಂದಿದ್ದಾರೆ. ಸಿಡಿಯಿಂದಾಗಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಸಂಕಟ ಉಂಟಾಗಿರುವುದರಿಂದ ಮುಜುಗರದಿಂದ ತಪ್ಪಿಸುಕೊಳ್ಳಲು ಇಂದು ನಡೆಯುವ ಸದನಕ್ಕೂ ಬಹುತೇಕ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಮತ್ತು ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ವಿಪಕ್ಷಗಳು ಹಾಗೂ ಸೈದ್ಧಾಂತಿಕ ವಿರೋಧಿಗಳು ಅದನ್ನೇ ಬಹುಮುಖ್ಯ ಅಸ್ತ್ರವಾಗಿರಿಸಿಕೊಂಡು ರಮೇಶ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನೂ ಮೂವರು ಪ್ರಭಾವಿಗಳ ವಿಡಿಯೋ ಇರುವುದಾಗಿ ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.
BJP Minister Ramesh Jarkiholi who has been caught in Caught in sex-for-job scandal is now planned to approach the court to stop his sex video from being played on News and Social Media Platforms.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm