ಬ್ರೇಕಿಂಗ್ ನ್ಯೂಸ್
04-03-21 12:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 4: ಅಶ್ಲೀಲ ಸಿಡಿ ಜಗಜ್ಜಾಹೀರಾದ ನಂತರ ಭಾರೀ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರ ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.
ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಹ ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ.
ನಿನ್ನೆ ತಡರಾತ್ರಿ ತನಕವೂ ಅಜ್ಞಾತ ಸ್ಥಳದಲ್ಲಿ ಮುಂದಿನ ನಡೆಯ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ ಸದ್ಯ ಬೆಂಗಳೂರು ನಿವಾಸಕ್ಕೆ ಬಂದಿದ್ದಾರೆ. ಸಿಡಿಯಿಂದಾಗಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಸಂಕಟ ಉಂಟಾಗಿರುವುದರಿಂದ ಮುಜುಗರದಿಂದ ತಪ್ಪಿಸುಕೊಳ್ಳಲು ಇಂದು ನಡೆಯುವ ಸದನಕ್ಕೂ ಬಹುತೇಕ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಮತ್ತು ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ವಿಪಕ್ಷಗಳು ಹಾಗೂ ಸೈದ್ಧಾಂತಿಕ ವಿರೋಧಿಗಳು ಅದನ್ನೇ ಬಹುಮುಖ್ಯ ಅಸ್ತ್ರವಾಗಿರಿಸಿಕೊಂಡು ರಮೇಶ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನೂ ಮೂವರು ಪ್ರಭಾವಿಗಳ ವಿಡಿಯೋ ಇರುವುದಾಗಿ ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.
BJP Minister Ramesh Jarkiholi who has been caught in Caught in sex-for-job scandal is now planned to approach the court to stop his sex video from being played on News and Social Media Platforms.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm