ಬ್ರೇಕಿಂಗ್ ನ್ಯೂಸ್
05-03-21 12:32 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.05: ರಮೇಶ್ ಜಾರಕಿಹೊಳಿ ರಾಸಲೀಲೆ CD ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ದೂರು ನೀಡದ ಕಾರಣ FIR ದಾಖಲಿಸಲಾಗಲ್ಲ. ಕಾನೂನಿನಡಿ ಎಫ್ಐಆರ್ ದಾಖಲಿಸಲು ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ವಕೀಲ ರಮೇಶ್ ಬೆಂಗಳೂರಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕಾನೂನಿನ ಪ್ರಕಾರ ಸಂತ್ರಸ್ತೆ, ಸಂತ್ರಸ್ತೆ ಪೋಷಕರು ಅಥವಾ ಸಂಬಂಧಿಕರು ದೂರು ನೀಡಬೇಕು. ಅನಾಮಿಕ ದೂರಿನಿಂದ ಕಾನೂನಿನಡಿ FIR ದಾಖಲಿಸಲಾಗಲ್ಲ. ದೂರು ಕೊಟ್ಟವನನ್ನೇ ಹಿಡಿದು ವಿಚಾರಣೆ ನಡೆಸಬೇಕು ಎಂದು ಹೇಳಿದ್ದಾರೆ.


ರಮೇಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ನೀಡಿದ್ದಾರೆ. ದಾರಿಯಲ್ಲಿ ಹೋಗುವವನು ಕೂಡ ದೂರು ಕೊಡಬಹುದು. ‘ಸಿಡಿ’ ಇದೆ ಎಂದು ಬೇಕಾಬಿಟ್ಟಿಯಾಗಿ ಮಾತಾಡಬಹುದು. ದೂರುದಾರ ದಿನೇಶ್ ಕಲ್ಲಹಳ್ಳಿ ಬಳಿ ಯಾವುದೇ ಸಾಕ್ಷಿ ಇಲ್ಲ. ವಿಡಿಯೋ ಸಾಕ್ಷ್ಯ ಸಾಕಾಗೋದಿಲ್ಲ ಎಂದು ರಮೇಶ್ ಜಾರಕಿಹೊಳಿ ಪರ ವಕೀಲ ರಮೇಶ್ ಬ್ಯಾಟಿಂಗ್ ಮಾಡಿದ್ದಾರೆ.


ಬೆಳಗಾವಿಯಲ್ಲಿ ಬಂದ್ ವಾತಾವರಣ
ಅಶ್ಲೀಲ ಸಿಡಿ ವಿಚಾರಕ್ಕಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ನಂತರ ಕ್ಷುದ್ರಗೊಂಡಿರುವ ಅವರ ಬೆಂಬಲಿಗರು ಬೆಳಗಾವಿಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಪ್ರತಿಭಟನೆಗೆ ಹೆದರಿ ಗೋಕಾಕ್ನಲ್ಲಿ ಕಾಲೇಜುಗಳನ್ನು ದಿಢೀರನೆ ಬಂದ್ ಮಾಡಲಾಗಿದೆ. ಇನ್ನೊಂದೆಡೆ ಸರ್ಕಾರಿ ಬಸ್ ಸಂಚಾರ ಸಹ ಗೋಕಾಕ್ನಲ್ಲಿ ಸ್ಥಗಿತಗೊಂಡಿದ್ದು, ಅರ್ಧ ದಾರಿಯಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳು ಮತ್ತು ಕೆಲಸದ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೊರಟವರು ಪರದಾಡುವಂತಾಗಿದೆ.

ಪ್ರತಿಭಟನೆಯ ಕಾವು ಏರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಗೋಕಾಕ್- ಧಾರವಾಡ ರಸ್ತೆ ತಡೆದು ಧರಣಿ ನಡೆಸುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ತಕ್ಷಣ ಧಾವಿಸಿದ ಪೊಲೀಸರು ಬೆಂಬಲಿಗನನ್ನು ತಡೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನು ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ನಲ್ಲಿ ರಮೇಶ್ ಬೆಂಬಲಿಗರ ಪ್ರತಿಭಟನೆ ಜೋರಾಗಿದ್ದು, ಟೈರ್ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟಿಸುತ್ತಿದ್ದಾರೆ.
Two days after lodging a complaint with Bengaluru’s Cubbon Park police station against former water resources minister Ramesh Jarkiholi who reigned over allegations of sexual exploitation, social activist Dinesh Kalahalli failed to appear before the police on Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm