ಬ್ರೇಕಿಂಗ್ ನ್ಯೂಸ್
06-03-21 12:15 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ, ಎನ್ಎಸ್ಎಲ್ ಎಂದೇ ಖ್ಯಾತರಾಗಿದ್ದ, ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅವರಿಗೆ 85 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬನಶಂಕರಿಯ ನಿವಾಸದಲ್ಲಿ ಮುಂಜಾನೆ 4.45 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದ ಎನ್ಎಸ್ಎಲ್ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಸಾಹಿತ್ಯದ ಬಹುತೇಕ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿದ್ದ ಇವರು 1974 ರಲ್ಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಲ್ಲದೇ ಎಲಿಯಟ್, ಷೇಕ್ಸ್ಪಿಯರ್ ಕಾವ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ ಭಾವಗೀತೆಗಳಿಂದ ಕನ್ನಡಿಗರ ಮನೆ ಮಾತಾಗಿದ್ದರು.''
"ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ'' ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
— CM of Karnataka (@CMofKarnataka) March 6, 2021
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
Dr N. S. Lakshminarayan Bhatta passes away at 85. born 1926 is a Kannada poet from Shivamogga district. He was awarded the Karnataka Sahitya Akademi in 1974.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm