ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm