ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 12:24 pm
Mangalore Correspondent
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
08-08-25 12:27 pm
Bangalore Correspondent
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm