ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm