ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm